ಕುಶಾಲನಗರ: ವ್ಯಕ್ತಿಯ ಕೊಲೆ- ಆರೋಪಿಗಳ ಬಂಧನ

Update: 2019-10-06 18:22 GMT

ಕುಶಾಲನಗರ, ಅ.6: ಕುಶಾಲನಗರ ಸಮೀಪದ ಹಳೇ ಕೂಡಿಗೆಯ ಬಳಿ ವ್ಯಕ್ತಿಯೋರ್ವನನ್ನು ಕೊಲೆಗೈದ ಘಟನೆ ರವಿವಾರ ರಾತ್ರಿ ನಡೆದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹಳೇ ಕೂಡಿಗೆ ನಿವಾಸಿ ಶಿವು(40) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಆತನ ಅತ್ತಿಗೆ ಯಶೋದಾ ಮತ್ತು ಆಕೆಯ ಮಗಳು ಹರಿಣಿ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿಗಳು ದೀಪದ ಕಂಬ ಮತ್ತು ಕಬ್ಬಣದ ಸಲಾಕೆಯಿಂದ ಗಂಭೀರ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೆ ಬಳಸಿದ್ದ ದೀಪದ ಕಂಬ ಹಾಗೂ ಕಬ್ಬಣದ ಸಲಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಡಿವೈಎಸ್ಪಿಮುರುಳೀಧರ್ ಹಾಗೂ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News