ಸುರತ್ಕಲ್ ನಲ್ಲಿ ರಕ್ತದಾನ ಶಿಬಿರ

Update: 2019-10-07 05:45 GMT

ಸುರತ್ಕಲ್  : ಬದ್ರಿಯಾ ಹೆಲ್ತ್ ಲೀಗ್ ಸುರತ್ಕಲ್, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಹಾಗು ಎಚ್.ಡಿ.ಎಫ್.ಸಿ ಬ್ಯಾಂಕ್ ಮಂಗಳೂರು ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಮಂಗಳೂರು ಇದರ ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು  ಸುರತ್ಕಲ್ ನ ಬದ್ರಿಯಾ ಹೆಲ್ತ್ ಲೀಗ್ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಜೀಶಾನ್ ಅಲಿ ಅಧ್ಯಕ್ಷತೆಯಲ್ಲಿ  ಹಾಫಿಳ್ ಮುಈನುದ್ದೀನ್ ರಝ್ವಿ ಅಲ್ ಅಮ್ಜದಿ ಉದ್ಘಾಟಿಸಿದರು.

ವೇದಿಕೆಯಲ್ಲಿ ಝುಲ್ಫಿಕರ್ ಅಲಿ, ಎಸ್.ಕೆ. ಮುಸ್ತಫಾ, ಅಬ್ದುಲ್ ಅಝೀಝ್, ಡಾ. ಮಹಮ್ಮದ್ ಹಶೀರ್, ಇಫಾಝ್ ಬನ್ನೂರು ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಕಾರ್ಯನಿರ್ವಾಹಕರು ಉಪಸ್ಥಿತರಿದ್ದರು.

ಈ ಸಂದರ್ಭ ದಸರಾ ಪ್ರಯುಕ್ತ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ 35 ಕೆಜಿ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದ ಶಂಝೀಲ್ ಅವರನ್ನು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಹಾಗೂ ಬದ್ರಿಯಾ ಹೆಲ್ತ್ ಲೀಗ್ ವತಿಯಿಂದ ಸನ್ಮಾನಿಸಲಾಯಿತು.

ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರದಲ್ಲಿ 45 ಮಂದಿ ಪಾಲ್ಗೊಂಡು ರಕ್ತದಾನ ಮಾಡಿದರು.ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಇದರ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.

ನಝೀಬುಲ್ಲಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News