ಮಂಗಳೂರು: ಶಂಕಿತ ಡೆಂಗ್‌ಗೆ ಫೈನಾನ್ಸ್ ಉದ್ಯೋಗಿ ಬಲಿ

Update: 2019-10-09 13:56 GMT

ಮಂಗಳೂರು, ಅ.9: ಕರಾವಳಿಯಲ್ಲಿ ಮಹಾಮಾರಿ ಡೆಂಗ್ ಹಾವಳಿ ಮಿತಿಮೀರಿದ್ದು, ಮಂಗಳೂರಿನಲ್ಲಿ ಮತ್ತೊಂದು ಜೀವವನ್ನು ಬಲಿ ಪಡೆದಿದೆ.

ಪಾಂಡೇಶ್ವರ ನಿವಾಸಿ ಸುಧಾಕರ್ ಆಚಾರ್ಯ (53) ಮೃತರು.

ಇವರು ನಗರದ ಖಾಸಗಿ ಫೈನಾನ್ಸ್ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು. ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟಿದ್ದಾರೆ.

ಆಸ್ಪತ್ರೆಯ ಚಿಕಿತ್ಸಾ ವೆಚ್ಚವೇ ಎರಡು ಲಕ್ಷ ರೂ. ದಾಟಿದ್ದು, ಇದಕ್ಕಾಗಿ ಸ್ನೇಹಿತರು ಮತ್ತು ಸಂಬಂಧಿಕರಿಂದ ಕುಟುಂಬಸ್ಥರು ಹಣ ಸಂಗ್ರಹಿದ್ದರು. ಮೃತರು ತಾಯಿ, ಪತ್ನಿ, ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ಬುಧವಾರ ಮಂಗಳೂರು ದಕ್ಷಿಣ ಶಾಸಕ, ವೇದವ್ಯಾಸ್ ಕಾಮತ್ ಅವರು ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿ ಕುಟುಂಬ ಸದಸ್ಯರಿಗೆ ಸಾಂತ್ವನ ನೀಡಿದ್ದಾರೆ. ಸರಕಾರಿಂದ ಪರಿಹಾರ ನೀಡುವ ಭರವಸೆಯನ್ನು ಕುಟುಂಬಕ್ಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News