ಮಾಧ್ಯಮ ಸ್ವಾತಂತ್ರ್ಯಕ್ಕೆ ನನ್ನ ಸರ್ಕಾರ ಸದಾ ಬದ್ಧ: ಸಿಎಂ ಯಡಿಯೂರಪ್ಪ

Update: 2019-10-10 13:51 GMT

ಬೆಂಗಳೂರು, ಅ.10: ವಿಧಾನಸಭೆಯ ಚಳಿಗಾಲದ ಅಧಿವೇಶನದ ನೇರ ಚಿತ್ರೀಕರಣಕ್ಕೆ ಖಾಸಗಿ ಸುದ್ದಿ ವಾಹಿನಿಗಳಿಗೆ ನಿರ್ಬಂಧ ವಿಧಿಸಿ ಸ್ಪೀಕರ್ ಆದೇಶ ಹೊರಡಿಸಿರುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಸ್ಪೀಕರ್ ನಿರ್ಧಾರವನ್ನು ಪುನರ್ ಪರಿಶೀಲಿಸಲು ವಿನಂತಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಕಲಾಪದ ನೇರ ಚಿತ್ರೀಕರಣಕ್ಕೆ ಖಾಸಗಿ ಸುದ್ದಿ ವಾಹಿನಿಗಳಿಗೆ ನಿರ್ಬಂಧ ವಿಧಿಸಿ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶಿಸಿದ್ದರು. ಇದಕ್ಕೆ ತೀವ್ರ ಆಕ್ಷೇಪಗಳು ವ್ಯಕ್ತವಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ "ಮಾಧ್ಯಮ ಸ್ವಾತಂತ್ರ್ಯಕ್ಕೆ ನನ್ನ ಸರ್ಕಾರ ಸದಾ ಬದ್ಧವಾಗಿದೆ. ವಿಧಾನ ಸಭೆಯ ಕಲಾಪದ ನೇರ ಪ್ರಸಾರಕ್ಕೆ ತಡೆ ಹಾಕಿರುವ ಸ್ಪೀಕರ್ ನಿರ್ಧಾರವನ್ನು ಪುನರ್ ಪರಿಶೀಲಿಸಲು ವಿನಂತಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಆದರೆ ಟ್ವೀಟ್ ಮಾಡಿದ ಕೆಲವೇ ಸಮಯದಲ್ಲಿ ಡಿಲಿಟ್ ಮಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News