ಐಟಿ ಇಲಾಖೆ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡುತ್ತಿದೆ: ಸಿದ್ದರಾಮಯ್ಯ

Update: 2019-10-10 05:53 GMT

ಬೆಂಗಳೂರು, ಅ.10: ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ಐಟಿ ಇಲಾಖೆ ನಡೆಸುತ್ತಿರುವ ದಾಳಿಗಳ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಜಿ ಪರಮೇಶ್ವರ್ ಮನೆ, ಶಿಕ್ಷಣ ಸಂಸ್ಥೆಗಳ ಮೇಲಿನ ಐಟಿ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

"ನಮ್ಮ ಪಕ್ಷವನ್ನು ರಾಜಕೀಯವಾಗಿ ಎದುರಿಸಲಾಗದೆ ನರೇಂದ್ರ ಮೋದಿ ಸರ್ಕಾರ ಈ ರೀತಿ ಅಧಿಕಾರ ದುರ್ಬಳಕೆ ಮಾಡಿಕೊಂಡು ನಮ್ಮನ್ನು ದಮನಿಸಲು ಹೊರಟಿದೆ. ಇದಕ್ಕೆ ನಾವು ಜಗ್ಗುವುದಿಲ್ಲ, ಬಗ್ಗುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News