ಸರಕಾರದ ವೈಫಲ್ಯವನ್ನು ಸದನದಲ್ಲಿ ಎಳೆ ಎಳೆಯಾಗಿ ತೆರೆದಿಡುತ್ತೇವೆ: ಕುಮಾರಸ್ವಾಮಿ

Update: 2019-10-10 07:55 GMT

ಬೆಂಗಳೂರು, ಅ.10: ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಫಲ ಆಗಿವೆ. ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೇಲಸ ಮಾಡಬೇಕಾಗಿರುವ ಹಿನ್ನೆಲೆ ಇಂದು ನಮ್ಮ ಪಕ್ಷದ ವತಿಯಿಂದ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

'ಬೀದಿಗಿಳಿದು ಪ್ರತಿಭಟನೆ ಮಾಡಿಯೂ ಎಚ್ಚೆತ್ತು ಕೊಳ್ಳದಿದ್ರೆ, ಮೂರು ದಿನಗಳ ಅಧಿವೇಶನದ ಕಲಾಪದಲ್ಲೂ ನಮ್ಮ ಹೋರಾಟ ಮುಂದುವರೆಯುತ್ತದೆ. ಮೂರು ತಿಂಗಳಲ್ಲಿ ಸರ್ಕಾರದಿಂದ ಆದ ವೈಫಲ್ಯವನ್ನು ಸದನದಲ್ಲಿ ಎಳೆ ಎಳೆಯಾಗಿ ತೆರೆದಿಡುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಕಲಾಪದಲ್ಲಿ ಮಾಧ್ಯಮಗಳಿಗೆ ಕಡಿವಾಣ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮಾಧ್ಯಮಗಳಿಗೆ ಕಡಿವಾಣ ಹಾಕುವ ಅವಶ್ಯಕತೆ ಇರಲಿಲ್ಲ. ಆದರೆ ಈ ಹಿಂದೆ ಅಧಿಕಾರದಲ್ಲಿದ್ದಾಗ ಮಾಡಿದ ತಪ್ಪನ್ನು ಮುಂದುವರೆಸುವುದಕ್ಕೆ ಯಾವುದೇ ಸಮಸ್ಯೆ ಆಗಬಾರದೆಂದು ಮಾಧ್ಯಮಗಳಿಗೆ ಕಡಿವಾಣ ಹಾಕಿದ್ದಾರೆ ಎಂದು ಎಚ್ಡಿಕೆ ವ್ಯಂಗ್ಯವಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News