ಬಂಟ್ವಾಳ ತಾಲೂಕು ಮಟ್ಟದ ಅಧಿಕಾರಿಗಳ ಮಾಸಿಕ ಕೆಡಿಪಿ ಸಭೆ

Update: 2019-10-10 09:26 GMT

ಬಂಟ್ವಾಳ, ಅ.10: ತಾಲೂಕು ಮಟ್ಟದ ಅಧಿಕಾರಿಗಳ ಮಾಸಿಕ ಕೆಡಿಪಿ ಸಭೆಯು ಗುರುವಾರ ತಾಲೂಕು ಪಂಚಾಯತ್‍ನ ಎಸ್‍ಜಿಎಸ್‍ವೈ ಸಭಾಂಗಣದಲ್ಲಿ ನಡೆಯಿತು.

ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಸಭೆಯ ಅಧ್ಯಕ್ಷತೆಯ ವಹಿಸಿ, ಇಲಾಖೆಯ ಮುಂದಿರುವ ಮಾಸಿಕ ಗುರಿಗಳನ್ನು ಸಮಯಕ್ಕೆ ಸರಿಯಾಗಿ ತಲುಪುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ಉಪಾಧ್ಯಕ್ಷ ಅಬ್ಬಾಸ್ ಅಲಿ ಮಾತನಾಡಿ, ಜನರಿಗೆ ಅಗತ್ಯವಿರುವ ನೂತನ ಕಾರ್ಯಕ್ರಮಗಳನ್ನು ರೂಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಎಲ್ಲಾ ಇಲಾಖಾ ಅಧಿಕಾರಿಗಳು ಮಾಸಿಕ ವರದಿ ನೀಡಿದರು.

ಈ ಸಂದರ್ಭದಲ್ಲಿ ತಾಪಂ ಮುಖ್ಯಕಾರ್ಯನಿರ್ವಣಾಧಿಕಾರಿ ರಾಜಣ್ಣ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News