ಭಾರತ ಗೌರವ ಪ್ರಶಸ್ತಿಗೆ ಕೆ.ಎಂ.ನಾಗರತ್ನ ಆಯ್ಕೆ

Update: 2019-10-10 12:59 GMT

ಮಂಡ್ಯ, ಅ.10: ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಎಂ.ನಾಗರತ್ನ ರಾಷ್ಟ್ರಮಟ್ಟದ ಭಾರತ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕಲಾಸಂಘ ಸಂಸ್ಥೆಯ ಕಾರ್ಯದರ್ಶಿ ಮಾರುತಿ ಬಡಿಗೇರ್ ತಿಳಿಸಿದ್ದಾರೆ.

ಜನಕಪುರಿ ಕನ್ನಡ ಕೂಟ ನವದೆಹಲಿ ಹಾಗೂ ಕಲಾಸಂಕುಲ ಸಂಸ್ಥೆ ಇವರ ಸಹಯೋಗದಲ್ಲಿ ದೆಹಲಿಯ ಕರ್ನಾಟಕ ಸಂಘದ ಆವರಣದಲ್ಲಿ ಅ.16ರಂದು  ನಡೆಯುವ ಕನ್ನಡಿಗರ ನುಡಿಹಬ್ಬ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಸುರೇಶ ಅಂಗಡಿ ಪ್ರದಾನ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News