ವಿಧಾನ ಪರಿಷತ್: ಆಡಳಿತ ಪಕ್ಷದ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಕ

Update: 2019-10-10 13:01 GMT

ಬೆಂಗಳೂರು, ಅ.10: ವಿಧಾನ ಪರಿಷತ್‌ನ ಆಡಳಿತ ಪಕ್ಷದ ನಾಯಕರಾಗಿ ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನೇಮಕವಾಗಿದ್ದಾರೆ.

ಗುರುವಾರ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ ವಿಷಯ ಪ್ರಸ್ತಾಪಿಸಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆಯಂತೆ ಆಡಳಿತ ಪಕ್ಷದ ನಾಯಕರಾಗಿ ಸಚಿವ ಶ್ರೀನಿವಾಸ ಪೂಜಾರಿಯನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದರು. ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್ ಸೂಚನೆಯಂತೆ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿ ಎಸ್.ಆರ್.ಪಾಟೀಲ್‌ರನ್ನು ನೇಮಕ ಮಾಡಿರುವುದಾಗಿ ಸದನಕ್ಕೆ ತಿಳಿಸಿದರು. ಇದೇ ವೇಳೆ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ಬಿಜೆಪಿಯ ಹಿರಿಯ ಸದಸ್ಯ ಮಹಂತೇಶ್ ಕವಟಗಿಮಠರನ್ನು ನೇಮಕ ಮಾಡಲಾಗಿದೆ ಎಂದರು.

ಎಚ್.ಡಿ.ಕುಮಾರಸ್ವಾಮಿಯ ಸೂಚನೆಯಂತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಬಸವರಾಜ ಹೊರಟ್ಟಿ, ಉಪನಾಯಕರಾಗಿ ಮರಿತಿಬ್ಬೇಗೌಡ ಮತ್ತು ಸಚೇತಕರನ್ನಾಗಿ ಚೌಡಾರೆಡ್ಡಿ ಆರ್.ತೂಪಲ್ಲಿ ಅವರನ್ನು ನೇಮಕ ಮಾಡಲಾಗಿದೆ ಎಂದು ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ ಪ್ರಕಟಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News