ಜಂಬೂ ಸವಾರಿಯಲ್ಲಿ ಪಾಲ್ಗೊಂಡ ಗಜಪಡೆಗೆ ಬೀಳ್ಕೊಡುಗೆ: ವಾಪಸ್ ಕಾಡಿಗೆ ತೆರಳಿದ ಆನೆಗಳು

Update: 2019-10-10 17:29 GMT

ಮೈಸೂರು,ಅ.10: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಪ್ರಮುಖ ಆಕರ್ಷಣೆಯೇ ಜಂಬೂಸವಾರಿ. ಜಂಬೂ ಸವಾರಿಯನ್ನು ಕಣ್ತುಂಬಿಕೊಳ್ಳಲು ದೇಶ, ವಿದೇಶಗಳಿಂದ ಜನರು ಆಗಮಿಸುತ್ತಾರೆ. ಇದರ ಆಕರ್ಷಣೆಯ ಕೇಂದ್ರವಾದ ಗಜಪಡೆಗಳು ತಮ್ಮ ಕಾರ್ಯವನ್ನು ಯಶಸ್ವಿಯಾಗಿ ಪೂರೈಸಿದ್ದು, ಇಂದು ಸ್ವಸ್ಥಾನಕ್ಕೆ ಮರಳಲಿವೆ.

ಗಜಪಡೆಗಳಿಗೆ ಇಂದು ಅರಮನೆಯ ಮುಂಭಾಗ ಪೂಜೆ ಸಲ್ಲಿಸಿ ಆತ್ಮೀಯವಾಗಿ ಬೀಳ್ಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಜಂಬೂಸವಾರಿಯಲ್ಲಿ ಪಾಲ್ಗೊಂಡಿದ್ದ ಅರ್ಜುನ, ವಿಜಯ, ವರಲಕ್ಷ್ಮಿ, ಧನಂಜಯ ಮತ್ತು ಈಶ್ವರ, ಕಾವೇರಿ ಸೇರಿದಂತೆ ಹತ್ತು ಆನೆಗಳಿಗೆ ಅರಮನೆ ಆವರಣದಲ್ಲಿ ವಿಶೇಷ ಪೂಜೆ ಸಲ್ಲಿಸಿ ಆತ್ಮೀಯವಾಗಿ ಬೀಳ್ಕೊಡಲಾಗಿದ್ದು, ಇಂದು ಕಾಡಿಗೆ ಮರಳಲಿವೆ. ಈ ಸಂದರ್ಭ ಯಾವುದೇ ಜನಪ್ರತಿನಿಧಿಗಳು ಭಾಗವಹಿಸಿರಲಿಲ್ಲ. ಅರಣ್ಯಾಧಿಕಾರಿಗಳು, ಜಿಲ್ಲಾಡಳಿತದ ವತಿಯಿಂದ ಆನೆಗಳನ್ನು ಅವುಗಳ ಶಿಬಿರಕ್ಕೆ ಆತ್ಮೀಯವಾಗಿ ಬೀಳ್ಕೊಡಲಾಗಿದೆ.

ಬಂಡೀಪುರದಲ್ಲಿ ನರಭಕ್ಷಕ ಹುಲಿಯನ್ನು ಸೆರೆ ಹಿಡಿಯಲು ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ದಸರಾ ಆನೆಗಳಾದ ಅಭಿಮನ್ಯು, ಗೋಪಾಲಸ್ವಾಮಿ, ಜಯಪ್ರಕಾಶ್ ಆನೆಗಳನ್ನು ನಿನ್ನೆ ಬೀಳ್ಕೊಡಲಾಗಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News