ಪದ್ಮಶ್ರೀ ಪುರಸ್ಕೃತ, ಸ್ಯಾಕ್ಸೋಫೋನ್ ವಾದಕ ಡಾ. ಕದ್ರಿ ಗೋಪಾಲನಾಥ್ ನಿಧನ

Update: 2019-10-11 04:09 GMT

ಮಂಗಳೂರು: ಪದ್ಮಶ್ರೀ ಪುರಸ್ಕೃತ, ಕರ್ನಾಟಿಕ್ ಸಂಗೀತ ಸ್ಯಾಕ್ಸೋಫೋನ್ ವಾದಕ ಡಾ. ಕದ್ರಿ ಗೋಪಾಲನಾಥ್ (69) ಶುಕ್ರವಾರ ಬೆಳಗ್ಗೆ ನಿಧನರಾದರು.

ಮೃತರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಗೋಪಾಲನಾಥ್ ಅವರ ಪತ್ನಿ ಮತ್ತು ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಮಂಗಳೂರು ಪದವಿನಂಗಡಿ ಮನೆಯಲ್ಲಿ ಶುಕ್ರವಾರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕದ್ರಿ ಗೋಪಾಲನಾಥ್ ಕರ್ನಾಟಕ ಸಂಗೀತ ಪದ್ಧತಿಯ ಪ್ರಸಿದ್ಧ ಸ್ಯಾಕ್ಸೊಫೋನ್ ವಾದಕರು. ಸ್ಯಾಕ್ಸೊಫೋನ್ ವಾದನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಅಳವಡಿಕೆಯಿಂದ ಅವರು ವಿಶ್ವಪ್ರಸಿದ್ಧಿ ಪಡೆದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News