ಉಪ್ಪಿನಂಗಡಿ: ಹರೀಶ್ಚಂದ್ರ ಆಚಾರ್ಯ ನಿಧನ

Update: 2019-10-11 06:31 GMT

ಉಪ್ಪಿನಂಗಡಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ, ಯಕ್ಷಗಾನದ ಅರ್ಥಧಾರಿ, ಉಪ್ಪಿನಂಗಡಿ ವಿಶ್ವಕರ್ಮ ಸಮಾಜ ಸೇವಾ ಸಂಘದ ಸ್ಥಾಪಕಾಧ್ಯಕ್ಷ ಹರೀಶ್ಚಂದ್ರ ಆಚಾರ್ಯ (60) ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ.

ಬೆಳ್ತಂಗಡಿ ತಾಲೂಕು ಇಳಂತಿಲದ ಶಿಲ್ಪಾ ನಿಲಯದ ಹರೀಶ್ಚಂದ್ರ ಆಚಾರ್ಯರಿಗೆ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಉಪ್ಪಿನಂಗಡಿ ಆಸ್ಪತ್ರೆಗೆ ಕರೆದೊಯ್ಯವಷ್ಟರಲ್ಲಿ ಅವರು ನಿಧನರಾದರು ಎಂದು ತಿಳಿದುಬಂದಿದೆ.

ಸರಳ, ಸಜ್ಜನಿಕೆಯ ವ್ಯಕ್ತಿತ್ವದ ಹರೀಶ್ಚಂದ್ರ ಆಚಾರ್ಯ ಉಪ್ಪಿನಂಗಡಿಯಲ್ಲಿರುವ ಶಿಲ್ಪಾ ಗ್ಲಾಸ್ ಆ್ಯಂಡ್ ಪ್ಲೈವುಡ್ ಸಂಸ್ಥೆಯ ಮಾಲಕರಾಗಿದ್ದು, ಉಪ್ಪಿನಂಗಡಿಯ ರಾಮನಗರದ ಶ್ರೀ ಶಾರದೋತ್ಸವ ಸಮಿತಿ, ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸಂಘ, ಶ್ರೀ ಗಣೇಶೋತ್ಸವ ಸಮಿತಿ, ಉಪ್ಪಿನಂಗಡಿ ವಿಜಯ- ವಿಕ್ರಮ ಕಂಬಳ ಸಮಿತಿ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ, ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಪೋಟೋ: ಹರೀಶ್ಚಂದ್ರ ಆಚಾರ್ಯ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News