ಚಿಕ್ಕಮಗಳೂರು : ಹೋಟೆಲ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ

Update: 2019-10-11 08:13 GMT

ಚಿಕ್ಕಮಗಳೂರು : ಹೋಟೆಲ್ ನಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಗಂಭೀರ ಗಾಯಗೊಂಡ ಘಟನೆ ಕಡೂರು ತಾಲೂಕಿನ ಸಿಂಗಟಗೆರೆ ಗ್ರಾಮದಲ್ಲಿ ನಡೆದಿದೆ.

ಸಿಂಗಟಗೆರೆ ಗ್ರಾಮದ ಸುರೇಶ್ ಹೋಟೆಲ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಈ ಘಟನೆ ನಡೆದಿದೆ.

ಗಂಭೀರವಾಗಿ ಗಾಯಗೊಂಡವರನ್ನು ಸುರೇಶ್, ಗೀತಾಮ್ಮ, ತಿಪ್ಪೇಶ್ ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಸಿಂಗಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News