ಪ್ರೀತಿ ನಿರಾಕರಿಸಿದ ಯುವತಿಗೆ ಚೂರಿ ಇರಿದ ಯುವಕ

Update: 2019-10-11 12:51 GMT

ಹೊಳೆನರಸೀಪುರ, ಅ.11: ಪ್ರೀತಿ ಮಾಡಲು ನಿರಾಕರಿಸಿದ ಯುವತಿಗೆ ರಸ್ತೆಯಲ್ಲಿ ಅಡ್ಡಗಟ್ಟಿ ಚೂರಿಯಿಂದ ಇರಿದಿರುವ ಪ್ರಕರಣ ಹೊಳೆನರಸೀಪುರದಲ್ಲಿ ಶುಕ್ರವಾರ ಮದ್ಯಾಹ್ನ ನಡೆದಿದೆ ಎನ್ನಲಾಗಿದೆ.

ಪ್ರಥಮ ಬಿಕಾಂ ವಿದ್ಯಾರ್ಥಿನಿ ಮೇಘನಾ (18) ‌ಚೂರಿ ಇರಿತಕ್ಕೆ ಒಳಗಾದ ಯುವತಿಯಾಗಿದ್ದು, ಪಡುವಲ ಹಿಪ್ಪೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ.ಎ ಓದುತ್ತಿರುವ ಅರಕಲಗೂಡು ತಾಲೂಕು ಕಸಬಾ ಹೋಬಳಿಯ ನೆಲಬಳ್ಳಿ ಗ್ರಾಮದ ಮಣಿಕಂಠ (19) ಚೂರಿ ಇರಿದ ಆರೋಪಿ ಎಂದು ಗುರುತಿಸಲಾಗಿದೆ.

ಈತ ಕಳೆದ ಕೆಲ ದಿನಗಳಿಂದ ಮೇಘನಾಳನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದು, ಇಂದು ಕಾಲೇಜು ಮುಗಿಸಿ ಮನೆಗೆ ಹೊರಟಿದ್ದ ಮೇಘನಾಳನ್ನು‌ ಹೊಳೆನರಸೀಪುರ ಬೈಪಾಸ್ ನಲ್ಲಿ ಅಡ್ಡ ಗಟ್ಟಿ ಚಾಕುವಿನಿಂದ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ.

ಚೂರಿ ಇರಿತದಿಂದ ಮೇಘನಾಳ‌ ಕುತ್ತಿಗೆ, ಕೈಗೆ ತೀವ್ರ ಗಾಯಗಳಾಗಿದ್ದು, ಆಕೆಯನ್ನು ಹೊಳೆನರಸೀಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಆರೋಪಿ ಮಣಿಕಂಠನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News