ಬ್ರಹ್ಮಾವರ: ನಾಪತ್ತೆಯಾಗಿದ್ದ ಯುವತಿ ಆತ್ಮಹತ್ಯೆ

Update: 2019-10-11 15:56 GMT

ಬ್ರಹ್ಮಾವರ, ಅ.11: ಎರಡು ದಿನಗಳ ಹಿಂದೆ ಮರಣ ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದ ಹೇರಾಡಿ ಗ್ರಾಮದ ರಂಗನಕೆರೆಯ ಸುನೀತಾ ಎಂಬವರ ಮಗಳು ರಕ್ಷಿತಾ(19) ಅವರ ಮೃತದೇಹ ಅ.11ರಂದು ಬೆಳಗ್ಗೆ ಮನೆ ಸಮೀಪದ ಪಂಚಾಯತ್ ಬಾವಿಯಲ್ಲಿ ಪತ್ತೆಯಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಅ.9ರಂದು ಮನೆಯಲ್ಲಿ ‘ನನ್ನ ಆರೋಗ್ಯ ಸರಿ ಇಲ್ಲದ ಕಾರಣ ಬದುಕಲು ಇಷ್ಟವಿಲ್ಲ, ಆತ್ಮಹತ್ಯೆ ಮಾಡಿ ಕೊಳ್ಳುತ್ತಿದ್ದೇನೆ’ ಎಂದು ಪತ್ರ ಬರೆದು ನಾಪತ್ತೆಯಾಗಿದ್ದರು. ಇದೇ ಕಾರಣದಿಂದ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News