ರಾಷ್ಟ್ರಪತಿಯನ್ನು ಭೇಟಿಯಾದ ಸಿಎಂ ಯಡಿಯೂರಪ್ಪ

Update: 2019-10-12 04:32 GMT

ಬೆಂಗಳೂರು, ಅ.12: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬೆಳಿಗ್ಗೆ ರಾಜಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. 

ವಿವಿಧ ಕಾರ್ಯಕ್ರಮ ಹಿನ್ನೆಲೆ ಈಗಾಗಲೇ ರಾಜ್ಯ ಪ್ರವಾಸದಲ್ಲಿರುವ ರಾಮನಾಥ ಕೋವಿಂದ್, ನಿನ್ನೆ ಸಂಜೆ ಮೈಸೂರಿನಿಂದ ಬೆಂಗಳೂರಿಗೆ ಆಗಮಿಸಿದ್ದರು. ನಿನ್ನೆ ಬೆಂಗಳೂರಿಗೆ ಬಂದಾಗ ಸಿಎಂ, ಅವರ ಸ್ವಾಗತಕ್ಕೆ ಹೋಗಿರಲಿಲ್ಲ. ಹೀಗಾಗಿ ಇಂದು ರಾಜಭವನಕ್ಕೆ ತೆರಳಿ ಮಾತುಕತೆ ನಡೆಸಿದರು. 

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಹಾಗೂ ಡಾ ಸಿ.ಎನ್. ಅಶ್ವಥನಾರಾಯಣ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News