ಐಟಿ ದಾಳಿ ಬಳಿಕ ತನ್ನ ಆಪ್ತ ಸಹಾಯಕ ಆತ್ಮಹತ್ಯೆಗೆ ಶರಣಾದ ಬಗ್ಗೆ ಪರಮೇಶ್ವರ್ ಹೇಳಿದ್ದು ಹೀಗೆ...

Update: 2019-10-12 10:38 GMT

ಬೆಂಗಳೂರು: ಆಪ್ತ ಸಹಾಯಕ ರಮೇಶ್‌ ಆತ್ಮಹತ್ಯೆ ಮಾಡಿಕೊಂಡ ವಿಚಾರ ಆಘಾತ ಉಂಟು ಮಾಡಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಸಂತಾಪ ವ್ಯಕ್ತಪಡಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಸ್ಥಳಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಮೇಶ್ ಬಹಳ ಒಳ್ಳೆಯ ಕೆಲಸಗಾರನಾಗಿದ್ದರು. ಎಲ್ಲಾ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದರು. ಐಟಿ ದಾಳಿ ಬಳಿಕ ಅವರಿಗೆ ಸಮಾಧಾನ ಹೇಳಿದ್ದೆ. ಯಾವುದೇ ತೊಂದರೆಯಾಗುವುದಿಲ್ಲ ಎಂದು ಧೈರ್ಯ ಹೇಳಿದ್ದೆ. ನಂತರ ಮನೆಗೆ ತೆರಳುವುದಾಗಿ ಹೇಳಿ ತೆರಳಿದ್ದರು. ನಂತರ ಅವರು ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಆಘಾತವಾಯಿತು ಎಂದು ಪ್ರತಿಕ್ರಿಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News