ಮಂಗಳೂರು: ಟಿಪ್ಪರ್-ಸ್ಕೂಟರ್ ಢಿಕ್ಕಿ; ಯುವಕ ಮೃತ್ಯು

Update: 2019-10-12 15:04 GMT

ಮಂಗಳೂರು, ಅ.12: ಟಿಪ್ಪರ್ ಲಾರಿಯೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬೈಕಂಪಾಡಿ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಶನಿವಾರ ನಡೆದಿದೆ.

ನಗರದ ಪಾಂಡೇಶ್ವರ ನಿವಾಸಿ ಮಂಜಯ್ಯ ನಾಯ್ಕ (23) ಮೃತರು ಎಂದು ಗುರುತಿಸಲಾಗಿದೆ. ಅವರು ನಗರದಲ್ಲಿ ಟೆಕ್ನಿಶಿಯನ್‌ ಆಗಿ ಕೆಲಸ ಮಾಡುತ್ತಿದ್ದರು.

ಈ ಕುರಿತು ಮಂಗಳೂರು ನಗರ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News