​ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2019-10-12 15:56 GMT

ಕಾರ್ಕಳ, ಅ.12: ಸರಿಯಾದ ಕೆಲಸವಿಲ್ಲದೆ ಹಾಗೂ ತನ್ನ ಮಕ್ಕಳಿಗೆ ಮದುವೆ ಯಾಗಿಲ್ಲ ಎಂಬ ಚಿಂತೆಯಲ್ಲಿ ಮನನೊಂದ ಹಿರ್ಗಾನ ಕುಕ್ಕುದಕಟ್ಟೆ ಕಾನಂಗಿ ರಸ್ತೆಯ ನಿವಾಸಿ ಬೊಗ್ಗು ಹಾಂಡ(55) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಅ.11ರಂದು ರಾತ್ರಿ ವೇಳೆ ಮನೆಯ ಕೋಣೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಪಾರ್ಶ್ವವಾಯು ಖಾಯಿಲೆಯಿಂದ ಬಳಲುತ್ತಿದ್ದ ಕುಕ್ಕಿಕಟ್ಟೆ ಇಂದಿರಾನಗರದ ಪವನ್ ಕುಮಾರ್(30) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಅ.11ರಂದು ಸಂಜೆ ವೇಳೆ ಮನೆಯ ಮಹಡಿಯ ಮಲಗುವ ಕೋಣೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News