ಪರಮೇಶ್ವರ್ ಪಿಎ ರಮೇಶ್ ಆತ್ಮಹತ್ಯೆ ಪ್ರಕರಣದ ಸೂಕ್ತ ತನಿಖೆಯಾಗಬೇಕು: ಸಿದ್ದರಾಮಯ್ಯ

Update: 2019-10-12 18:02 GMT

ಚಿಕ್ಕಮಗಳೂರು, ಅ.12: ಜಿ.ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆ ಪ್ರಕರಣದ ಸೂಕ್ತ ತನಿಖೆಯಾಗಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಖಾಸಗಿ ಕಾರ್ಯಕ್ರಮದ‌ ನಿಮಿತ್ತ ಶನಿವಾರ ರಾತ್ರಿ ಚಿಕ್ಕಮಗಳೂರಿಗೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಆತ್ಮಹತ್ಯೆ ಪ್ರಕರಣದ ತನಿಖೆ ಆದರೆ ಸತ್ಯಾಸತ್ಯತೆ ತಿಳಿಯುತ್ತದೆ. ಐಟಿ ಅಧಿಕಾರಿಗಳು ಹೇಳಿದ ಎಲ್ಲದನ್ನೂ ನಂಬುವುದಕ್ಕೆ ಆಗುವುದಿಲ್ಲ ಎಂದರು.

ರಮೇಶ್ ಕುಟುಂಬಸ್ಥರು ದೂರು ನೀಡಿದ್ದಾರೆ. ಡೆತ್ ನೋಟ್ ಬಗ್ಗೆ ನನಗೆ ಮಾಹಿತಿ ಇಲ್ಲ. ಸಾವಿಗೆ ಕಾರಣ ಯಾರೇ ಆದರೂ ಕಾನೂನು ರೀತಿಯ ಕ್ರಮ ಆಗಬೇಕು. ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News