ತನ್ನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ ಮಹಿಳೆಯನ್ನು ಮದುವೆಯಾದ ಸರಕಾರಿ ಅಧಿಕಾರಿ

Update: 2019-10-13 07:18 GMT
Photo: ANI

ಕುಶಿನಗರ್, ಅ.13: ತನ್ನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದ ಮಹಿಳೆಯನ್ನು ಸರಕಾರಿ ಅಧಿಕಾರಿಯೊಬ್ಬರು ವಿವಾಹವಾದ ಘಟನೆ ಉತ್ತರ ಪ್ರದೇಶದ ಹಾಪುರ್ ನಲ್ಲಿ ನಡೆದಿದೆ.

ಮದುವೆಯಾಗುವುದಾಗಿ ನಂಬಿಸಿ ಹಾಪುರ್ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ 4 ವರ್ಷಗಳ ಕಾಲ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಮಹಿಳೆ ಆರೋಪಿಸಿದ್ದರು.

"ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ದಿನೇಶ್ ಕುಮಾರ್ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದರು. ಆಕೆಯ ಜೊತೆ ಆತ ನಾಲ್ಕು ವರ್ಷಗಳಿಂದ ವಾಸಿಸುತ್ತಿದ್ದ. ಆದರೆ ಇವರಿಬ್ಬರ ಸಂಬಂಧದ ಬಗ್ಗೆ ಯಾರೊಬ್ಬರಿಗೂ ತಿಳಿದಿರಲಿಲ್ಲ. ಆತ ಆಕೆಯನ್ನು ಮದುವೆಯಾಗಲು ಬಯಸಿದ್ದ, ಆದರೆ ಇಬ್ಬರ ನಡುವೆ ಜಗಳವಾದ ನಂತರ ಮದುವೆಯನ್ನು ಮುಂದೂಡಲು ಆತ ನಿರ್ಧರಿಸಿದ. ಇಂದು ಮಹಿಳೆಯನ್ನು ಮದುವೆಯಾಗುವುದಾಗಿ ದಿನೇಶ್ ಹೇಳಿದ್ದಾನೆ" ಎಂದು ಕುಶಿನಗರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅನಿಲ್ ಕುಮಾರ್ ಸಿಂಗ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News