ಅ. 14ರಂದು ಬಂಟ್ವಾಳದ ಮಿತ್ತಕೆರೆಯಲ್ಲಿ ಕದ್ರಿ ಗೋಪಾಲನಾಥ್‍ ಅಂತ್ಯಕ್ರಿಯೆ

Update: 2019-10-13 10:37 GMT

ಬಂಟ್ವಾಳ, ಅ. 13: ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಅವರ ಅಂತ್ಯಕ್ರಿಯೆ ಅ. 14ರಂದು ಸಂಜೆ 4ಗಂಟೆಗೆ ಅವರ ಹುಟ್ಟೂರಾದ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಮಿತ್ತಕೆರೆ ಎಂಬಲ್ಲಿ ಪೊಲೀಸ್ ಗೌರವಗಳೊಂದಿಗೆ ನಡೆಯಲಿದೆ ಎಂದು ತಹಶೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದ್ದಾರೆ.

ಗೋಪಾಲನಾಥ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಲ್ಲದೆ, ರಾಜ್ಯ ಸರಕಾರದ ಪೊಲೀಸ್ ಗೌರವದೊಂದಿಗೆ ಸಕಲ ವಿಧಿವಿಧಾನ ಗಳು ನಡೆದ ಬಳಿಕ ಅಂತ್ಯಸಂಸ್ಕಾರ ನಡೆಯಲಿದೆ ಅವರು ತಿಳಿಸಿದ್ದಾರೆ.

ಸಜೀಪ ಮಿತ್ತಕೆರೆಗೆ ತಹಶೀಲ್ದಾರ್ ರಶ್ಮಿ ಅವರು ಭೇಟಿ ನೀಡಿ ಅಂತ್ಯಕ್ರಿಯೆ ನಡೆಯುವ ಸ್ಥಳ ಹಾಗೂ ಪೊಲೀಸ್ ಗೌರವ ನೀಡಲು ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಿದ್ದಾರೆ. ಗೋಪಾಲನಾಥ್ ಅವರ ಪಾರ್ಥಿವ ಶರೀರದ ಯಾತ್ರೆ ಸೋಮವಾರ ಬೆಳಗ್ಗೆ 9ಕ್ಕೆ ಪದವಿನಂಗಡಿ ದೇವಿಕಟ್ಟೆಯಿಂದ ಹೊರಟು ಮಂಗಳೂರು ಪುರಭವನ ತಲುಪಲಿದೆ. ಪುರಭವನದಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News