ಮಾಧ್ಯಮಗಳ ಮೇಲೆ ಸರಕಾರದ ಆಕ್ರಮಣ: ಕಾಂಗ್ರೆಸ್ ಆರೋಪ

Update: 2019-10-13 12:33 GMT

ಬೆಂಗಳೂರು, ಅ. 13: ‘ಪಾರದರ್ಶಕ ಆಡಳಿತ ಕೊಡಲಾಗದ, ನೆರೆ ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವಲ್ಲಿ ವಿಫಲವಾಗಿರುವ ಬಿಜೆಪಿ ನೇತೃತ್ವದ ಸರಕಾರ ಮಾಧ್ಯಮ ಮತ್ತು ಜನತೆಯ ಹಕ್ಕುಗಳ ಮೇಲೆ ಆಕ್ರಮಣ ಮಾಡಿದೆ’ ಎಂದು ಕೆಪಿಸಿಸಿ ಆರೋಪಿಸಿದೆ.

ರವಿವಾರ ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಬಹಿಷ್ಕಾರ ಮಾಡಿ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಮಾಧ್ಯಮ ಪ್ರತಿನಿಧಿಗಳು ಸಾಂಕೇತಿಕ ಪ್ರತಿಭಟನೆ ನಡೆಸಿದ್ದಾರೆ ಎಂದು ಆಕ್ರೋಶ ಹೊರಹಾಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News