ಬೆಂಗಳೂರು: ಎಸ್ಸೆಸ್ಸೆಫ್ ರಾಜ್ಯ ಸಮಿತಿಯಿಂದ ಎನ್.ಆರ್.ಸಿ ಬಗ್ಗೆ ಮಾಹಿತಿ ಶಿಬಿರ

Update: 2019-10-13 14:29 GMT

ಬೆಂಗಳೂರು: ಎಸ್ಸೆಸ್ಸೆಫ್ ರಾಜ್ಯ ಸಮಿತಿಯಿಂದ ಎನ್ ಆರ್ ಸಿ ಬಗ್ಗೆ ಮಾಹಿತಿ ಶಿಬಿರವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಉಮ್ಮರ್ ಅಸ್ಸಖಾಫ್ ತಂಙಳ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆಯಿತು.

ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಸಿರಾಜುದ್ದೀನ್ ಸಖಾಫಿ ಕನ್ಯಾನ ದುಆ: ನೆರವೇರಿಸಿದರು. ಎಸ್ಸೆಸ್ಸೆಫ್ ರಾಷ್ಟ್ರೀಯ ಕಾರ್ಯದರ್ಶಿ ಶರೀಫ್ ಮಾಸ್ಟರ್ ಕಾರ್ಯಕ್ರಮ ಉದ್ಘಾಟಿಸಿದರು.

ನಿವೃತ ಐ.ಪಿ.ಎಸ್ ಅಧಿಕಾರಿ ನಿಸಾರ್ ಅಹ್ಮದ್ ಎನ್.ಆರ್.ಸಿ  ಬಗ್ಗೆ  ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ರವೂಫ್ ಖಾನ್ ಕುಂದಾಪುರ, ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು, ಮೌಲಾನಾ ಅಶ್ರಪ್ ಅಂಜದಿ ಪಕ್ಷಿಕೆರೆ, ನವಾಝ್ ಭಟ್ಕಳ್, ರಾಜ್ಯ ನಾಯಕರಾದ ಎನ್.ಸಿ. ರಹೀಂ ಉಡುಪಿ, ಸಿದ್ದೀಕ್ ಸಖಾಫಿ ಭದ್ರಾವತಿ ಮೊದಲಾದವರು ಉಪಸ್ಥಿತರಿದ್ದರು.

ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ ಸ್ವಾಗತಿಸಿ, ಕೊನೆಗೆ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News