ಚೇಳಾಯಾರು: ನದಿಯಲ್ಲಿ ಮುಳುಗಿ ಮೃತ್ಯು

Update: 2019-10-13 15:36 GMT

ಮಂಗಳೂರು, ಅ.13: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳಾಯಾರು ನಿವಾಸಿ ಜಯರಾಮ ದೇವಾಡಿಗ (43)ಎಂಬವರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಅಪರಾಹ್ನ ನಡೆದಿದೆ.

ಈಜಾಡಲೆಂದು ನದಿಗಿಳಿದ ಇವರು ಆಕಸ್ಮಿಕವಾಗಿ ನದಿಯಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ. ಮೃತದೇಹವನ್ನು ಸ್ಥಳೀಯರ ಸಹಕಾರದಿಂದ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಮೃತರು ಅವಿವಾಹಿತರಾಗಿದ್ದು, ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News