ಕಾರು ಢಿಕ್ಕಿ: ಪಾದಾಚಾರಿ ಮೃತ್ಯು
Update: 2019-10-13 16:14 GMT
ಉಡುಪಿ, ಅ.13: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಅ.13ರಂದು ಮಧ್ಯಾಹ್ನ 12.30ರ ಸುಮಾರಿಗೆ ಕರಾವಳಿ ಬೈಪಾಸ್ ಸಮೀಪದ ಲಕ್ಷ್ಮೀ ಸಭಾಭವನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲ್ಲಿ ನಡೆದಿದೆ.
ಮೃತರನ್ನು 80ನೆ ಬಡಗುಬೆಟ್ಟು ಗ್ರಾಮದ ಕುಕ್ಕದಕಟ್ಟೆ ನಿವಾಸಿ ನಾರಾಯಣ ಶೆಟ್ಟಿಗಾರ(68) ಎಂದು ಗುರುತಿಸಲಾಗಿದೆ. ಇವರು ಉಡುಪಿ ಶಾರದ ಹೊಟೇಲ್ನಲ್ಲಿ ನಡೆಯುವ ಔತಣ ಕಾರ್ಯಕ್ರಮಕ್ಕೆ ಹೋಗಲು ರಸ್ತೆ ದಾಟಲು ರಸ್ತೆ ಬದಿ ನಿಂತಿದ್ದಾಗ ಕರಾವಳಿ ಜಂಕ್ಷನ್ ಕಡೆಯಿಂದ ಸಂತೆಕಟ್ಟೆ ಕಡೆಗೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.