‘ನರಭಕ್ಷಕ’ನ ಸೆರೆ

Update: 2019-10-13 18:20 GMT

ಚಾಮರಾಜನಗರದಲ್ಲಿ ಇಬ್ಬರು ರೈತರನ್ನು ಬಲಿ ತೆಗೆದುಕೊಂಡ ನರಭಕ್ಷಕ ಹುಲಿ ಸತತ ಐದು ದಿನಗಳ ನಿರಂತರ ಕೂಂಬಿಂಗ್ ಕಾರ್ಯಾಚರಣೆ ನಂತರ ಸೆರೆ ಸಿಕ್ಕಿದೆ. ಇದರಿಂದಾಗಿ ಕಾಡಂಚಿನ ಗ್ರಾಮದ ನಿವಾಸಿಗಳು ನಿಟ್ಟುಸಿರು ಬಿಡುವಂತಾಗಿದೆ. ಕಳೆದ ನಲವತ್ತು ದಿನಗಳ ಅಂತರದಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ನ್ಯಾಷನಲ್ ಪಾರ್ಕ್‌ನ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಾದ ಚೌಡಳ್ಳಿ ಮತ್ತು ಹುಂಡೀಪುರ ಗ್ರಾಮದ ರೈತರಿಬ್ಬರನ್ನು ಹಾಡುಹಗಲೇ ನರಭಕ್ಷಕ ಹುಲಿ ಬಲಿ ತೆಗೆದುಕೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor