ಅಮಿತ್ ಶಾ ಪುತ್ರ ಬಿಸಿಸಿಐನ ನೂತನ ಕಾರ್ಯದರ್ಶಿ, ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಹೋದರ ಖಜಾಂಚಿ?

Update: 2019-10-14 08:45 GMT

ಹೊಸದಿಲ್ಲಿ, ಅ.14: ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಪುತ್ರ ಜೇ ಶಾ  ಬಿಸಿಸಿಐನ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಹೋದರ ಅರುಣ್ ಧುಮಾಲ್ ಬಿಸಿಸಿಐನ ಖಜಾಂಚಿಯಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿದೆ.

"ಅಮಿತ್ ಶಾ ಅವರ ಪುತ್ರ ಜೇ ಶಾ ಕಾರ್ಯದರ್ಶಿ ಮತ್ತು ಅನುರಾಗ್ ಠಾಕೂರ್ ರ ಸಹೋದರ ಅರುಣ್ ಧುಮಾಲ್ ಖಜಾಂಚಿಯಾಗಿ ಆಯ್ಕೆಯಾಗಲಿದ್ದಾರೆ" ಎಂದು ಬಿಸಿಸಿಐಗೆ ಆಪ್ತ ಮೂಲಗಳು ತಿಳಿಸಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.

"ಗಂಗೂಲಿ ಇದೀಗ ಅಧ್ಯಕ್ಷ ಅಭ್ಯರ್ಥಿ. ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಎಲ್ಲ ಪ್ರತಿನಿಧಿಗಳ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ" ಎಂದು ಗಂಗೂಲಿಯವರ ಆಪ್ತ ಮೂಲಗಳು ಹೇಳಿವೆ.

ನಾಮಪತ್ರ ಸಲ್ಲಿಕೆಗೆ ಸೋಮವಾರ ಕೊನೆಯ ದಿನವಾಗಿದ್ದು, ಒಂದು ವಾರದ ನಿರಂತರ ಲಾಬಿ ಬಳಿಕ ಎಲ್ಲ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗುವ ಸಂಭವ ಇರುವುದರಿಂದ ಮತದಾನ ನಡೆಯುವ ಸಾಧ್ಯತೆ ಕಡಿಮೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News