ಸಾರ್ವಜನಿಕ ಸ್ಥಳಗಳಲ್ಲಿ ಪತ್ರಕರ್ತರಿಗೆ ವಿಶೇಷ ಗ್ಯಾಲರಿಗೆ ಆಗ್ರಹಿಸಿ ಮನವಿ

Update: 2019-10-14 10:14 GMT

ಮಂಗಳೂರು, ಅ.14: ಸಾರ್ವಜನಿಕ ಸ್ಥಳಗಳಲ್ಲಿ ವರದಿಗಾರಿಕೆಗೆ ಸಂಬಂಧಿಸಿ ಪತ್ರಕರ್ತರಿಗೆ ವಿಶೇಷ ಗ್ಯಾಲರಿ ನಿರ್ಮಾಣ ಮಾಡುವಂತೆ ಆಗ್ರಹಿಸಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇಂದು ಮನವಿ ಸಲ್ಲಿಸಲಾಯಿತು.

ಅಧ್ಯಕ್ಷ ಶ್ರೀನಿವಾಸ್ ನಾಯಕ್ ನೇತೃತ್ವದ ನಿಯೋಗ ಮನವಿಯನ್ನು ಸಲ್ಲಿಸಿದ್ದು, ಸ್ಮಾರ್ಟ್ ಸಿಟಿ ಮೂಲಕ ನಗರದ ವಿವಿಧ ಕಡೆ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತಿದೆ.

ಈ ಸಂದರ್ಭ ಸಾರ್ವಜನಿಕ ಸ್ಥಳಗಳಾದ ಕದ್ರಿ ಪಾರ್ಕ್, ನೆಹರೂ ಮೈದಾನ, ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ಪತ್ರಕರ್ತರಿಗೆ ವಿಶೇಷ ಗ್ಯಾಲರಿ ನಿರ್ಮಾಣವಾದಲ್ಲಿ ಪತ್ರಕರ್ತರಿಗೆ ಸಹಕಾರಿಯಾಗಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News