×
Ad

ವಿಕಲಚೇತನರ ಸಬಲೀಕರಣ ಕ್ಷೇತ್ರ: ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2019-10-14 19:45 IST

ಉಡುಪಿ, ಅ.14: ರಾಜ್ಯ ಮಟ್ಟದಲ್ಲಿ ಬೆಂಗಳೂರಿನಲ್ಲಿ ಡಿ.3ರಂದು ನಡೆಯುವ ವಿಶ್ವ ವಿಕಲಚೇತನರ ದಿನಾಚರಣೆಯ ಸಂದರ್ಭದಲ್ಲಿ ವಿಕಲಚೇತನರ ಸಬಲೀಕರಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವೆ ಸಲ್ಲಿಸಿರುವ/ ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರಿಗೂ ರಾಜ್ಯ ಪ್ರಶಸ್ತಿಯನ್ನು ನೀಡಿ, ಗೌರವಿಸಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉದ್ದೇಶಿಸಿದೆ.

ಇದಕ್ಕಾಗಿ ಆಸಕ್ತರು ನಿಗದಿತ ಅರ್ಜಿ ನಮೂನೆಗಳನ್ನು ಉಡುಪಿ ಜಿಲ್ಲಾ ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು, ರಜತಾದ್ರಿ, ಮಣಿಪಾಲ (ದೂ.ಸಂಖ್ಯೆ: 0820-2574810/811) ಇವರಿಂದ ಅಥವಾ ಇಲಾಖೆಯ ವೆಬ್‌ಸೈಟ್ (www.welfareofdisabled.kar.nic.in ) ಅಥವಾ (www.dwdsc.kar.nic.in) ನಿಂದ ಪಡೆದುಕೊಳ್ಳಬಹುದು. ಸಂಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅ.19ರೊಳಗೆ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಕಚೇರಿಗೆ ಸಲ್ಲಿುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News