ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

Update: 2019-10-14 14:18 GMT

ಉಡುಪಿ, ಅ.14: ಜಿಲ್ಲೆಯ ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಸೂತಿ ತಜ್ಞರು, ಸಮುದಾಯ ಆರೋಗ್ಯ ಕೇಂದ್ರ ಶಿರ್ವದಲ್ಲಿ ಮಕ್ಕಳ ತಜ್ಞರು, ಸಮುದಾಯ ಆರೋಗ್ಯ ಕೇಂದ್ರ ಬೈಂದೂರಿನಲ್ಲಿ ಅರವಳಿಕೆ ತಜ್ಞರು, ಸಮುದಾಯ ಆರೋಗ್ಯ ಕೇಂದ್ರ ಹೆಬ್ರಿಯಲ್ಲಿ ಪ್ರಸೂತಿ ತಜ್ಞರು, ಮಕ್ಕಳ ತಜ್ಞರು, ಅರವಳಿಕೆ ತಜ್ಞರಾಗಿ ಕರ್ತವ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ತಜ್ಞ ವೈದ್ಯರು (ಮಾಸಿಕ ವೇತನ 1,10,000 ರೂ.) ಹಾಗೂ ಎಂಬಿಬಿಎಸ್ ಪದವಿ ಪಡೆದ ವೈದ್ಯರು ಗಂಗೊಳ್ಳಿ, ಕೊಲ್ಲೂರು, ಈದು ಮತ್ತು ಸಮುದಾಯ ಆರೋಗ್ಯ ಕೇಂದ್ರ ಶಿರ್ವ, ಹೆಬ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗೆ (ಮಾಸಿಕ ವೇತನ 42000 ರೂ.) ಅರ್ಜಿಯನ್ನು ಸಲ್ಲಿಸಬಹುದು. ತಜ್ಞ ವೈದ್ಯರು ಆನ್ ಕಾಲ್ ಬೇಸಿಸ್‌ನಲ್ಲಿಯೂ ಅರ್ಜಿಯನ್ನು ಸಲ್ಲಿಸಬಹುದು.

ನೇಮಕಾತಿಗೆ ಸಂಬಂಧಿಸಿ ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಇವರಿಂದ ಕಚೇರಿ ವೇಳೆಯಲ್ಲಿ ಅಥವಾ ದೂ.ಸಂಖ್ಯೆ:0820-2536650, 9449843066ನ್ನು ಸಂಪರ್ಕಿಸಿ ಪಡೆಯ ಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News