ಕನ್ನಡ ರಾಜ್ಯೋತ್ಸವ: ಕನ್ನಡ ಕವನಗಳ ಆಹ್ವಾನ

Update: 2019-10-14 14:41 GMT

ಮಂಗಳೂರು, ಅ.14: ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಗರದ ಪುರಭವನದಲ್ಲಿ ಕನ್ನಡ ಭಾಷಾ ಕವಿಗೋಷ್ಠಿಯನ್ನು ಆಯೋಜಿಸಿದೆ.

ಈ ಗೋಷ್ಠಿಯಲ್ಲಿ ಕವನ ವಾಚಿಸಲು ಆಸಕ್ತಿ ಇರುವವರು ಕನ್ನಡ ಭಾಷೆಯ ಸ್ವರಚಿತ ಕವನಗಳನ್ನು ಅ.26ರೊಳಗೆ ಅಧ್ಯಕ್ಷರು, ದ.ಕ. ಜಿಲ್ಲಾ ಕಸಾಪ ಕಲ್ಕೂರ ಪ್ರತಿಷ್ಠಾನ, ಶ್ರಿಕೃಷ್ಣ ಕಾಂಪ್ಲೆಕ್ಸ್, ಮಹಾತ್ಮಗಾಂಧಿ ರಸ್ತೆ, ಕೊಡಿಯಾಲ್‌ಬೈಲ್, ಮಂಗಳೂರು ಈ ವಿಳಾಸಕ್ಕೆ ಕಳುಹಿಸಿಕೊಡಬಹುದು ಎಂದು ಕಸಾಪ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News