ಸೇತುವೆಯಿಂದ ನದಿಗೆ ಹಾರಿದ ಯುವಕನ ಮೃತದೇಹ ಪತ್ತೆ

Update: 2019-10-14 16:19 GMT

ಉಡುಪಿ, ಅ.14: ಕಲ್ಯಾಣಪುರ ಸೇತುವೆಯಲ್ಲಿ ಅ.13ರಂದು ರಾತ್ರಿ ವೇಳೆ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿದ್ದರೆನ್ನಲಾದ ಯುವಕನ ಮೃತದೇಹ ಇಂದು ಸಂಜೆ ವೇಳೆ ನದಿ ನೀರಿನಲ್ಲಿ ಪತ್ತೆಯಾಗಿದೆ.

ಮೃತರನ್ನು ಬನ್ನಂಜೆಯ ದೀಕ್ಷಿತ್ ಶೆಟ್ಟಿ(26) ಎಂದು ಗುರುತಿಸಲಾಗಿದೆ. ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಇವರು ರಾತ್ರಿ 10:30ರ ಸುಮಾರಿಗೆ ತನ್ನ ಸ್ಕೂಟರ್‌ನಲ್ಲಿ ಸೇತುವೆ ಬಳಿ ಬಂದಿದ್ದು, ಅಲ್ಲಿ ಸ್ಕೂಟರ್ ನಿಲ್ಲಿಸಿ ಮತ್ತು ಅದರಲ್ಲಿ ತನ್ನ ಮೊಬೈಲ್ ಇಟ್ಟು ಮೇಲಿನಿಂದ ನದಿಗೆ ಹಾರಿದರೆಂದು ತಿಳಿದುಬಂದಿದೆ.

ಅ.14ರಂದು ಬೆಳಗ್ಗೆ ಈ ಬಗ್ಗೆ ಮಾಹಿತಿ ತಿಳಿದ ಸ್ಥಳೀಯರು ನದಿಯಲ್ಲಿ ಹುಡುಕಾಟ ನಡೆಸಿದ್ದರು. ಸಂಜೆ 5:30ರ ಸುಮಾರಿಗೆ ಮೃತದೇಹವು ಸೇತುವೆಯ ಅಡಿ ಭಾಗದಲ್ಲಿ ಪತ್ತೆಯಾಗಿದೆ. ಮೃತರ ಸಾವಿಗೆ ಕಾರಣ ತಿಳಿದುಬಂದಿಲ್ಲ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News