ಅಕ್ರಮ ದನದ ಮಾಂಸ ಸಾಗಾಟ: ಓರ್ವನ ಸೆರೆ

Update: 2019-10-14 16:24 GMT

ಕಾಪು, ಅ.14: ಸ್ಕೂಟರ್‌ನಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಓರ್ವನನ್ನು ಕಾಪು ಪೊಲೀಸರು ಅ.13ರಂದು ಬೆಳಗ್ಗೆ ಮೂಳೂರು ಗ್ರಾಮದ ಗುರುದೇವ ಬಾರ್ ಸಮೀಪ ಬಂಧಿಸಿದ್ದಾರೆ.

ಮಲ್ಲಾರು ಗ್ರಾಮದ ಪಕೀರಣಕಟ್ಟೆಯ ಇಸ್ಮಾಯಿಲ್(60) ಬಂಧಿತ ಆರೋಪಿ. ಇನ್ನೋರ್ವ ಆರೋಪಿ ಇಸ್ಮಾಯಿಲ್ ಎಂಬಾತ ಪರಾರಿಯಾಗಿ ದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನಿಂದ ಕೃತ್ಯಕ್ಕೆ ಬಳಸಿದ ಎರಡು ಸ್ಕೂಟರ್ ಹಾಗೂ 15 ಕೆ.ಜಿ. ದನದ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News