ರಸ್ತೆ ಅಪಘಾತ : ಗಾಯಾಳು ರಿಕ್ಷಾ ಚಾಲಕ ಮೃತ್ಯು
Update: 2019-10-14 16:25 GMT
ಬಂಟ್ವಾಳ, ಅ. 14: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಆಟೋ ರಿಕ್ಷಾ ಚಾಲಕನೋರ್ವರು ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೆಲ್ಕಾರ್ ಸಮೀಪದ ನರಹರಿ ನಗರ ನಿವಾಸಿ, ಆಟೋ ರಿಕ್ಷಾ ಚಾಲಕ ರಾಘವೇಂದ್ರ ರಾವ್ (40) ಮೃತರು. ಅ.9ರಂದು ಬಂಟ್ವಾಳ ಬಂಡಾರಿಬೆಟ್ಟು ಎಂಬಲ್ಲಿ ಕಾರು ಹಾಗೂ ಆಟೋ ರಿಕ್ಷಾ ನಡುವಿನ ರಸ್ತೆ ಅಪಘಾತದಲ್ಲಿ ರಿಕ್ಷಾ ಚಾಲಕ ರಾಘವೇಂದ್ರ ರಾವ್ ಅವರಿಗೆ ಗಾಯ ಗಳಾಗಿತ್ತು. ಇವರು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಬಂಟ್ವಾಳ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.