ಮೈಸೂರು ಜಿಲ್ಲೆಯನ್ನು ಯಾವುದೇ ಕಾರಣಕ್ಕೂ ವಿಭಜನೆ ಮಾಡಬಾರದು: ಸಿದ್ದರಾಮಯ್ಯ

Update: 2019-10-14 18:25 GMT

ಮೈಸೂರು,ಅ.14: ಮೈಸೂರು ಜಿಲ್ಲೆಯನ್ನು ಯಾವುದೇ ಕಾರಣಕ್ಕೂ ವಿಭಜನೆ ಮಾಡಬಾರದು ಎಂದು ಮಾಜಿ ಸಿಎಂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಟಿ.ನರಸೀಪುರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕ ಎಚ್.ವಿಶ್ವನಾಥ್ ಮುಖ್ಯಮಂತ್ರಿಗಳಿಗೆ ಮೈಸೂರು ಜಿಲ್ಲೆಯನ್ನು ವಿಭಜಿಸಿ ಹುಣಸೂರು ಜಿಲ್ಲೆ ಮಾಡುವಂತೆ ಮನವಿ ಸಲ್ಲಿಸಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಮೈಸೂರು ಜಿಲ್ಲೆಯನ್ನು ವಿಭಜಿಸಬಾರದು ಎಂದರು.

ಅನರ್ಹ ಶಾಸಕ ಎಚ್.ವಿಶ್ವನಾಥ್ ಯಾಕೆ ಹೀಗೆ ಹೇಳಿದ್ದಾರೊ ನನಗೆ ಗೊತ್ತಿಲ್ಲ, ಆದರೆ ಮೈಸೂರನ್ನು ಯಾವುದೇ ಕಾರಣಕ್ಕೂ ವಿಭಜನೆ ಮಾಡಬಾರದು ಎಂದು ಹೇಳಿದರು.

ಈ ಸಂಬಂಧ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ. ಮೈಸೂರು ಸಾಂಸ್ಕೃತಿಕ ರಾಜಧಾನಿ ಇದನ್ನು ಇಬ್ಬಾಗ ಮಾಡುವುದು ಸರಿಯಲ್ಲ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News