ಕಲಬುರ್ಗಿ: ಕನ್ಹಯ್ಯ ಕುಮಾರ್ ಉಪನ್ಯಾಸ ರದ್ದು

Update: 2019-10-15 05:30 GMT

ಕಲಬುರ್ಗಿ: ಇಲ್ಲಿಯ ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಮತ್ತು ಅಧ್ಯಯನ ಸಂಸ್ಥೆಯಲ್ಲಿ ಇಂದು ಆಯೋಜಿಸಿದ್ದ ಕನ್ಹಯ್ಯ ಕುಮಾರ್ ಅವರ ಉಪನ್ಯಾಸವನ್ನು ವಿ.ವಿ.ಕುಲಪತಿ ಪ್ರೊ. ಪರಿಮಳಾ ಅಂಬೇಕರ್ ರದ್ದುಗೊಳಿಸಿದ್ದಾರೆ‌.

ಉನ್ನತ ಶಿಕ್ಷಣ ಇಲಾಖೆಯಿಂದ ಮೌಖಿಕ ಸೂಚನೆ ಅನುಸಾರ ಕಾರ್ಯಕ್ರಮ ರದ್ದುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕಾರ್ಯಕ್ರಮ ನಡೆಯುವ ಡಾ.ಬಿ‌.ಆರ್.ಅಂಬೇಡ್ಕರ್ ಸಭಾಂಗಣದ ಸುತ್ತಮುತ್ತ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬೆಳಗ್ಗೆ 11ಕ್ಕೆ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್  ಉಪನ್ಯಾಸ ‌ನೀಡಬೇಕಿತ್ತು. ಆದರೆ ಬೆಳಗ್ಗೆ ‌ನಡೆದ ಕ್ಷಿಪ್ರ ಬೆಳವಣಿಗೆಯಲ್ಲಿ ಕಾರ್ಯಕ್ರಮ ‌ನಡೆಸದಂತೆ ನಿರ್ಬಂಧ ಹೇರಲಾಗಿದೆ‌.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News