ಗೂಂಡಾ ಕಾಯ್ದೆಯಡಿ ರೌಡಿ ಬಂಧನ
Update: 2019-10-15 11:55 GMT
ಬೆಂಗಳೂರು, ಅ.15: ಕೊಲೆ, ಕೊಲೆಯತ್ನ, ದೊಂಬಿ, ಜೂಜಾಟ ಇನ್ನಿತರ ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿ ಶಿವರಾಜ್ನನ್ನು ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಾರತ್ತಹಳ್ಳಿಯ ಮಂಜುನಾಥ್ ನಗರದ ರೌಡಿ ಶಿವರಾಜು (30) ಬಂಧಿತ ರೌಡಿಶೀಟರ್ ಎಂದು ಪೊಲೀಸರು ತಿಳಿಸಿದ್ದಾರೆ.
ಕಳ್ಳಭಟ್ಟಿ ವ್ಯವಹಾರ, ರೌಡಿ ಚಟುವಟಿಕೆಗಳು, ಬೆದರಿಕೆ, ಇನ್ನಿತರ ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಆತನನ್ನು ಕಾರ್ಯಾಚರಣೆ ನಡೆಸಿ ಬಂಧಿಸಿ ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ರೌಡಿ ಶಿವರಾಜ್ ವಿರುದ್ಧ 2 ಕೊಲೆ, 2 ಕೊಲೆಯತ್ನ, ದರೋಡೆಗೆ ಸಿದ್ಧತೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳು ದಾಖಲಾಗಿದ್ದು, ಇನ್ನು 7 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.