ಉಡುಪಿ ಜಿಲ್ಲೆಯ ಎಲ್ಲಾ ಕಂದಾಯ ಇಲಾಖೆ ಕಚೇರಿಗಳಲ್ಲಿ ಇ ಆಡಳಿತ: ಸದಾಶಿವ ಪ್ರಭು

Update: 2019-10-15 15:17 GMT

ಉಡುಪಿ, ಅ.15: ಜಿಲ್ಲೆಯ ಕಂದಾಯ ಇಲಾಖೆ ವ್ಯಾಪ್ತಿಯ ಎಲ್ಲಾ ಕಚೇರಿ ಗಳಲ್ಲಿ ಇ-ಆಡಳಿತ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿದ್ದಾರೆ.

ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಕಂದಾಯ ಇಲಾಖೆ ವ್ಯಾಪ್ತಿಯ ಎಲ್ಲಾ ಕಚೇರಿಗಳ ಸಿಬ್ಬಂದಿಗಳಿಗೆ ಆಯೋಜಿಸಿದ್ದ ಇ-ಆಡಳಿತ ಕುರಿತ ತರಬೇತಿ ಕಾರ್ಯಕ್ರವುದಲ್ಲಿ ಅವರು ಮಾತನಾಡುತಿದ್ದರು.

ಕಂದಾಯ ಇಲಾಖೆ ವ್ಯಾಪ್ತಿಯ ಎಲ್ಲಾ ಕಚೇರಿಗಳಲ್ಲಿ ಇ-ಆಡಳಿತ ಜಾರಿಗೊಳಿಸುವ ಮೂಲಕ ಪೇಪರ್‌ಲೆಸ್ ಕಚೇರಿ ನಿರ್ಮಾಣದ ಜೊತೆಗೆ ಸಾರ್ವಜನಿಕರ ತ್ವರಿತ ಗತಿಯಲ್ಲಿ ಸೇವೆಗಳನ್ನು ಒದಗಿಸುವ ಮೂಲಕ ಆಡಳಿತ ದಲ್ಲಿ ಪಾರದರ್ಶಕ ಆಡಳಿತ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದರು.

ಇ-ಆಡಳಿತ ವ್ಯವಸ್ಥೆಯಲ್ಲಿ ಕಾರ್ಯ ನಿರ್ವಹಿಸುವ ಕುರಿತಂತೆ ಹರ್ಷರಾಜ್ ತರಬೇತಿ ನೀಡಿದರು. ಜಿಲ್ಲೆಯ ಎಲ್ಲಾ ತಾಲೂಕುಗಳ ಕಂದಾಯ ಇಲಾಖೆ ವ್ಯಾಪ್ತಿಯ ಸಿಬ್ಬಂದಿ ತರಬೇತಿಯಲ್ಲಿ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News