ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2019-10-15 16:47 GMT

ಕುಂದಾಪುರ, ಅ.15: ಅನಾರೋಗ್ಯದಿಂದ ಬಳಲುತ್ತಿದ್ದ ಬೀಜಾಡಿ ಗ್ರಾಮದ ಹಾವಳಿ ನಿವಾಸಿ ಅಣ್ಣಯ್ಯ ಪೂಜಾರಿ(78) ಎಂಬವರು ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಅ.14ರಂದು ರಾತ್ರಿ ಅಡುಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ವೈಯಕ್ತಿಕ ಕಾರಣದಿಂದ ನಲ್ಲೂರು ಬೀರಾಲ್ ಪೇಟೆಯ ಬಾಡಿಗೆ ಮನೆ ನಿವಾಸಿ ಗೋಪಾಲ ಸೆರ್ವಗಾರ್(85) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಅ.15ರಂದು ಬೆಳಗ್ಗೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News