ಚಿದಂಬರಂರನ್ನು ಬಂಧಿಸಿದ ಈ.ಡಿ.ತನಿಖಾ ತಂಡ

Update: 2019-10-16 06:46 GMT

 ಹೊಸದಿಲ್ಲಿ,ಅ.16: ಐಎನ್‌ಎಕ್ಸ್ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಮಾಜಿ ಕೇಂದ್ರ ವಿತ್ತ ಸಚಿವ ಪಿ.ಚಿದಂಬರಂ ಅವರನ್ನು ವಿಚಾರಣೆ ನಡೆಸಲು ಬುಧವಾರ ಬೆಳಗ್ಗೆ ತಿಹಾರ್ ಜೈಲಿಗೆ ಧಾವಿಸಿದ್ದ ಜಾರಿ ನಿರ್ದೇಶನಾಲಯ(ಈ.ಡಿ.)ಅಧಿಕಾರಿಗಳ ತಂಡ ಅವರನ್ನು ಬಂಧಿಸಿದೆ.

 ಐಎನ್‌ಎಕ್ಸ್ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇಂದ್ರ ಏಜೆನ್ಸಿಗೆ ಕಾಂಗ್ರೆಸ್ ನಾಯಕ ಚಿದಂಬರಂ ಅವರನ್ನು ವಿಚಾರಣೆ ನಡೆಸಲು ಹಾಗೂ ಅಗತ್ಯವಿದ್ದರೆ ಅವರನ್ನು ಬಂಧಿಸುವುದಕ್ಕೂ ಮಂಗಳವಾರ ನೀಡಿದ ಆದೇಶದಲ್ಲಿ ವಿಶೇಷ ಸಿಬಿಐ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಅವಕಾಶ ನೀಡಿದ್ದರು. ಈ.ಡಿ.ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.

ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಆಗಸ್ಟ್ 21ರಂದು ಸಿಬಿಐ ಕಸ್ಟಡಿಗೆ ಸೇರಿದ್ದ 74ರ ಹರೆಯದ ಚಿದಂಬರಂ ಸೆ.5ರಿಂದ ಜೈಲಿನಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News