ಐವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿ

Update: 2019-10-16 12:26 GMT

ಬೆಂಗಳೂರು, ಅ.16: ಹುದ್ದೆಯ ನಿರೀಕ್ಷೆಯಲ್ಲಿದ್ದ ಐವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿ ಹಾಗೂ ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಸರಕಾರ ಹೊರಡಿಸಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಶೇಕ್ ತನ್ವೀರ್ ಆಸಿಫ್‌ರನ್ನು ಹೊಸಪೇಟೆ ಉಪ ವಿಭಾಗದ ಸಹಾಯಕ ಆಯುಕ್ತ, ಡಾ.ನವೀನ್ ಭಟ್ ವೈ. ಅವರನ್ನು ಹಾಸನ ಉಪ ವಿಭಾಗದ ಸಹಾಯಕ ಆಯುಕ್ತ, ಡಾ.ದಿಲೀಶ್ ಸಾಸಿ ಅವರನ್ನು ಲಿಂಗಸುಗೂರು ಉಪ ವಿಭಾಗದ ಸಹಾಯಕ ಆಯುಕ್ತ, ಡಾ.ಕೆ.ನಂದಿನಿದೇವಿ ಅವರನ್ನು ಮಧುಗಿರಿ ಉಪ ವಿಭಾಗದ ಸಹಾಯಕ ಆಯುಕ್ತೆ ಹಾಗೂ ಭನ್ವರ್ ಸಿಂಗ್ ಮೀನಾರನ್ನು ಬಸವಕಲ್ಯಾಣ ಉಪ ವಿಭಾಗದ ಸಹಾಯಕ ಆಯುಕ್ತರನ್ನಾಗಿ ನೇಮಿಸಲಾಗಿದೆ.

ಕೆಎಎಸ್ ಅಧಿಕಾರಿ ಡಾ.ಶಂಕರಪ್ಪ ವಾಣಿಕ್ಯಲ್ ವರ್ಗಾವಣೆಯಿಂದ ತೆರವಾಗಿರುವ ಬೀದರ್ ಉಪ ವಿಭಾಗದ ಸಹಾಯಕ ಆಯುಕ್ತ ಹುದ್ದೆಗೆ ಐಎಎಸ್ ಅಧಿಕಾರಿ ಅಕ್ಷಯ್ ಶ್ರೀಧರ್ ಹಾಗೂ ಲೋಖಂಡೆ ಸ್ನೇಹಲ್ ಸುಧಾಕರ್ ಅವರನ್ನು ಇಂಡಿ ಉಪ ವಿಭಾಗದ ಸಹಾಯಕ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News