ಮನೆ, ನಿವೇಶನ ರಹಿತ ಬೈಂದೂರು ಗ್ರಾಮ ಸಮಾವೇಶ

Update: 2019-10-16 14:22 GMT

ಬೈಂದೂರು, ಅ.16: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಮನೆ, ನಿವೇಶನ ರಹಿತರಿಗೆ ನಿವೇಶನ ಸ್ಥಳ ಗುರುತಿಸಿ, ಭೂಮಿ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ನ.18ರಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯಲಿರುವ ಅನಿರ್ದಿಷ್ಟಾವಧಿ ಧರಣಿ ಮುಷ್ಕರದ ಪೂರ್ವ ಸಿದ್ಧತೆಗಾಗಿ ಬೈಂದೂರು ವ್ಯಾಪ್ತಿಯ ಮನೆ,ನಿವೇಶನ ರಹಿತರ ಸಮಾವೇಶವನ್ನು ಮಂಗಳವಾರ ಆಯೋಜಿಸಲಾಗಿತ್ತು.

ಸಮಾವೇಶವನ್ನು ಉದ್ಘಾಟಿಸಿದ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಉಪಾಧ್ಯಕ್ಷ ರಾಜೀವ ಪಡುಕೋಣೆ ಮಾತನಾಡಿ, ನಿವೇಶನ ರಹಿತರು ಸಂಘಟಿತರಾಗಿ ತಮ್ಮ ಹಕ್ಕಿನ ಭೂಮಿ ಹೋರಾಟಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

ಸಂಘದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಮಾತನಾಡಿ, ಸರಕಾರದಿಂದ ಆಯ್ಕೆಗೊಂಡ ಅರ್ಹ ಫಲಾನುಭವಿ ಅರ್ಜಿ ದಾರರು ಮಣಿಪಾಲ, ಉಡುಪಿ ಜಿಲ್ಲಾಧಿಕಾರಿ ಕಚೇರಿ ಚಲೋ ಹೋರಾಟಕ್ಕೆ ಭಾಗವಹಿಸಬೇಕು ಎಂದು ಹೇಳಿದರು.

ಮುಖಂಡರಾದ ನಾಗರತ್ನ ನಾಡ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News