ಮೂವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

Update: 2019-10-16 16:30 GMT

ಬೆಂಗಳೂರು, ಅ.16: ರಾಜ್ಯ ಸರಕಾರವು ಮೂವರು ಕೆಎಎಸ್ ಅಧಿಕಾರಿಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಡಾ.ಕೆ.ಎನ್.ಅನುರಾಧ-ವಿಶೇಷ ಜಿಲ್ಲಾಧಿಕಾರಿಗಳು(ಭೂಸ್ವಾಧೀನ), ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ)ಬೆಂಗಳೂರು-ಖಾಲಿ ಹುದ್ದೆಗೆ ನೇಮಿಸಲು ಅಧಿಕಾರಿಯ ಸೇವೆಯನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ವಶಕ್ಕೆ ನೀಡಲಾಗಿದೆ. ಎಸ್.ರಂಗಪ್ಪ-ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು-ಕೆ.ಎಂ.ಜಾನಕಿ ಇವರ ಜಾಗಕ್ಕೆ ವರ್ಗಾಯಿಸಲಾಗಿದೆ. ಸಿ.ಎನ್.ಶ್ರೀಧರ್-ಪ್ರಧಾನ ವ್ಯವಸ್ಥಾಪಕರು(ಆಡಳಿತ ಮತ್ತು ಮಾನವ ಸಂಪನ್ಮೂಲ) ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪೆನಿ(ಚೆಸ್ಕಾಂ), ಮೈಸೂರು-ಖಾಲಿ ಹುದ್ದೆಗೆ ನೇಮಿಸಲು ಅಧಿಕಾರಿಯ ಸೇವೆಯನ್ನು ಇಂಧನ ಇಲಾಖೆಯ ವಶಕ್ಕೆ ನೀಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News