ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ಪಿ.ರಾಜೀವ್ ನೇಮಕ
Update: 2019-10-16 16:31 GMT
ಬೆಂಗಳೂರು, ಅ. 16: ಬೆಳಗಾವಿ ಜಿಲ್ಲೆಯ ಕುಡಚಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರಾಜೀವ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಅಲ್ಲದೆ, ನಿಗಮದ ಅಧ್ಯಕ್ಷರೂ ಆಗಿರುವ ಶಾಸಕ ಪಿ.ರಾಜೀವ್ ಅವರಿಗೆ ರಾಜ್ಯ ಸಚಿವರ ದರ್ಜೆಯ ಸ್ಥಾನಮಾನವನ್ನು ಕಲ್ಪಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ವಿ.ರಮೇಶ್ ಅವರು ಆದೇಶ ಹೊರಡಿಸಿದ್ದಾರೆ.