ಬೆಂಗಳೂರು ನಗರ ಜಿ.ಪಂ ಅಧ್ಯಕ್ಷರ ವಿರುದ್ಧ ಎಸಿಬಿಗೆ ದೂರು

Update: 2019-10-16 17:09 GMT

ಬೆಂಗಳೂರು, ಅ. 16: ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮುನಿರಾಜು ಅವರು ಮತ್ತೆ ತನ್ನನ್ನೇ ಅಧ್ಯಕ್ಷನನ್ನಾಗಿ ಮಾಡಬೇಕೆಂದು ಸದಸ್ಯರಿಗೆ ಆಮಿಷವೊಡ್ಡಿ ಅವರನ್ನು ವಿದೇಶ ಪ್ರವಾಸಕ್ಕೆ ಕರೆದೊಯ್ಯುತ್ತಿರುವ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಎನ್.ಹನುಮೇಗೌಡ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ದೂರು ನೀಡಿದ್ದಾರೆ.

ಈ ಸಂಬಂಧ ಖಾಸಗಿ ಸುದ್ದಿವಾಹಿನಿಗಳಲ್ಲಿ ಸುದ್ದಿ ಬಿತ್ತರವಾಗಿದ್ದು, ಸದಸ್ಯರಿಗೆ ಲಕ್ಷಾಂತರ ರೂ.ಆಮಿಷವೊಡ್ಡುವ ಮೂಲಕ ಜಿಲ್ಲಾ ಪಂಚಾಯತ್ ಸದಸ್ಯರನ್ನು ಖರೀದಿ ಮಾಡಲಾಗುತ್ತಿದೆ. ರಾಜ್ಯದಲ್ಲಿ ನೆರೆ ಪರಿಸ್ಥಿತಿ ಸಂದರ್ಭದಲ್ಲಿ ಮೋಜು-ಮಸ್ತಿಗಾಗಿ ವಿದೇಶ ಪ್ರವಾಸ ಸರಿಯಲ್ಲ ಎಂದು ಅವರು ಆಕ್ಷೇಪಿಸಿದ್ದಾರೆ.

ಪ್ರಭಾವಿ ರಾಜಕಾರಣಿ ಹಾಗೂ ಜಿ.ಪಂ ಅಧ್ಯಕ್ಷ ಮುನಿರಾಜು ಅವರ ಮೇಲೆ ಈಗಾಗಲೇ ಹಲವು ಆರೋಪಗಳಿದ್ದು, ಇದೀಗ ಸದಸ್ಯರನ್ನು ವಿದೇಶ ಪ್ರವಾಸಕ್ಕೆ ಕರೆದೊಯ್ಯಲು ದೊಡ್ಡ ಮೊತ್ತದ ಹಣ ಎಲ್ಲಿಂದ ಬಂತು ಎಂಬ ಬಗ್ಗೆಯೂ ತನಿಖೆ ನಡೆಸಬೇಕೆಂದು ಕೋರಿ ಹನುಮೇಗೌಡ ದೂರು ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News