ಅಕ್ರಮ ಜಾನುವಾರು ಸಾಗಾಟ ಆರೋಪ: ಇಬ್ಬರು ಸೆರೆ

Update: 2019-10-16 17:13 GMT

ಬಂಟ್ವಾಳ, ಅ. 16: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಪದವು ಚನಿಲ ಎಂಬಲ್ಲಿ ನಡೆದ ಅಕ್ರಮ ಜಾನುವಾರು ಸಾಗಾಟದ ಆರೋಪದ ಮೇರೆಗೆ ಇಬ್ಬರನ್ನು ಪೊಲೀಸರು ಬುಧವಾರ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಟ್ವಾಳ ಮಂಗಿಲಪದವು ನಿವಾಸಿ ಮುಹಮ್ಮದ್ ಇಕ್ಬಾಲ್ (36), ಬೊಳಂತೂರು ನಿವಾಸಿ ಉನೈಸ್ (25) ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಟ್ಲ ಕಸಬಾ ಗ್ರಾಮದ ಮಂಗಿಪದವು ಜಂಕ್ಷನ್‍ನಲ್ಲಿ ಅ. 14ರಂದು ಜಾನುವಾರಗಳ ಅಕ್ರಮ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಚರಣೆ ನಡೆಸಿದ್ದರು. ಈ ವೇಳೆ ಆರೋಪಿಗಳು ಪರಾರಿಯಾಗಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಾರ್ಯಾಚರಣೆಯಲ್ಲಿ ಎಸ್ಸೈ ಯಲ್ಲಪ್ಪ, ಎಸ್ಸೈ ದನಂಜಯ, ಸಿಬ್ಬಂದಿ ಜಯಕುಮಾರ್, ಅನುಕುಮಾರ್, ಪ್ರತಾಪ್, ಲೋಕೇಶ್ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News