ಪಂಜಿಕಲ್ಲು ಗ್ರಾಮ ಮಟ್ಟದ ಕಾಂಗ್ರೆಸ್ ಪಂಚಾಯತ್ ಮಿಲನ

Update: 2019-10-17 16:36 GMT

ಬಂಟ್ವಾಳ, ಅ. 17: ಪಂಜಿಕಲ್ಲು ಗ್ರಾಮ ಪಂಚಾಯತ್ ವಲಯದ ಕಾಂಗ್ರೆಸ್ ಪಂಚಾಯತ್ ಮಿಲನ ಕಾರ್ಯಕ್ರಮ ಆಚಾರಿ ಪಲ್ಕೆ ಜಂಕ್ಷನ್‍ನಲ್ಲಿ ನಡೆಯಿತು.

ಮಾಜಿ ಸಚಿವ ಬಿ. ರಮಾನಾಥ ರೈ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿರೋಧ ಪಕ್ಷದವರ ಅಪಪ್ರಚಾರಕ್ಕೆ ಗ್ರಾಪಂ ಚುನಾವಣೆಯ ಮೂಲಕ ಪ್ರತ್ಯುತ್ತರ ನೀಡುವ ಮೂಲಕ ಪಕ್ಷವನ್ನು ಮತ್ತಷ್ಟು ಬಲವರ್ಧಿಸಬೇಕಾಗಿದೆ. ಕಾರ್ಯಕರ್ತರು ಪಕ್ಷದ ಘನತೆಯನ್ನು ಕಾಪಾಡುವುದರ ಜೊತೆಗೆ ಪಕ್ಷ, ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಕಾರ್ಯಕರ್ತರಿಂದ ಸಲಹೆ ಸೂಚನೆಗಳನ್ನು ಸ್ವೀಕರಿಸಿ, ಕಾರ್ಯಕರ್ತರು ತಮ್ಮ ವೈಯಕ್ತಿಕ ವರ್ಚಸ್ಸನ್ನು ವೃದ್ಧಿಸುವ ಮೂಲಕ ಪಕ್ಷಕ್ಕೆ ಶಕ್ತಿ ನೀಡುವಂತೆ ವಿನಂತಿಸಿದರು.

ಪಂಚಾಯತ್ ಸಮಿತಿ ರಚನೆ

ವಲಯ ಹಾಗೂ ಬೂತ್ ಸಮಿತಿಯನ್ನು ಪುನರ್‍ರಚಿಸಿ ಪಂಚಾಯತ್ ಸಮಿತಿ ಅಧ್ಯಕ್ಷರನ್ನಾಗಿ ಸದಾನಂದ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು. ವಲಯ ಪ್ರದಾನ ಕಾರ್ಯದರ್ಶಿಯಾಗಿ ದೇವಪ್ಪ ಕುಲಾಲ್, ಬೂತ್ ಸಮಿತಿ ಅಧ್ಯಕ್ಷರಾಗಿ ಲೋಕಯ್ಯ ಪೂಜಾರಿ, ನೇಮಿರಾಜ್ ಕಡಂಬ, ರವಿ ಪೂಜಾರಿ, ವಿಕ್ಟರ್ ಪಾಯ್ಸ್, ಸುರೇಶ್ ಜೊರಾ ಹಾಗೂ ವಲಯ ಯುವಕಾಂಗ್ರೆಸ್ ಅಧ್ಯಕ್ಷರಾಗಿ ಸಂತೋಷ್ ಪೂಜಾರಿ, ಮಹಿಳಾ ಅಧ್ಯಕ್ಷರಾಗಿ ವಸಂತಿ ಕುಲಾಲ್ ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದ್ಯಸರಾದ ಚಂದ್ರಪ್ರಕಾಶ್ ಶೆಟ್ಟಿ, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಜಗದೀಶ್ ಕೊಯಿಲ, ಮಾಜಿ ಅಕ್ರಮ ಸಕ್ರಮ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಮುಖಂಡರಾದ ಅಶೋಕ್ ಮೈರನ್‍ಪಾದೆ, ಪಂಚಾಯತ್ ಸದಸ್ಯರಾದ ವಿಶ್ವನಾಥ ಶೆಟ್ಟಿ, ಜಯಶ್ರೀ ಉಪಸ್ಥಿತರಿದ್ದರು. ದೇವಪ್ಪ ಕುಲಾಲ್ ಸ್ವಾಗತಿಸಿ, ರಾಜೇಶ್ ಗೌಡ ವಂದಿಸಿದರು.          

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News