ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಪಿ.ಚಿದಂಬರಂ ಅ.24ರವರೆಗೆ ಈ.ಡಿ.ವಶಕ್ಕೆ

Update: 2019-10-17 16:38 GMT

ಹೊಸದಿಲ್ಲಿ,ಅ.17: ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ವಿತ್ತಸಚಿವ ಪಿ.ಚಿದಂಬರಂ ಅವರನ್ನು ಗುರುವಾರ ಇಲ್ಲಿಯ ರೋಸ್ ಅವೆನ್ಯೂ ಜಿಲ್ಲಾ ನ್ಯಾಯಾಲಯವು ಅ.24ರವರೆಗೆ ಜಾರಿ ನಿರ್ದೇಶನಾಲಯ (ಈ.ಡಿ)ದ ಕಸ್ಟಡಿಗೆ ಒಪ್ಪಿಸಿದೆ.

ಸಿಬಿಐ ಪ್ರಕರಣದಲ್ಲಿ ಅವರ ನ್ಯಾಯಾಂಗ ಬಂಧನ ಅವಧಿಯನ್ನೂ ನ್ಯಾಯಾಲಯವು ಅ.24ರವರೆಗೆ ವಿಸ್ತರಿಸಿದೆ. ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಶಂಕಿತ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಚಿದಂಬರಂ ಅವರನ್ನು ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗಿತ್ತು.

ಚಿದಂಬರಂ ಪರ ವಕೀಲರು ಅರ್ಜಿಯಲ್ಲಿ ಕೋರಿಕೊಂಡಂತೆ ಅವರಿಗೆ ಪಾಶ್ಚಾತ್ಯ ಟಾಯ್ಲೆಟ್,ಮನೆಯ ಊಟ ಮತ್ತು ಔಷಧಿಗಳ ಸೌಲಭ್ಯಗಳಿಗೆ ನ್ಯಾಯಾಲಯವು ಅಸ್ತು ಎಂದಿದೆ.

ಈ.ಡಿ.ಬುಧವಾರ ತಿಹಾರ ಜೈಲಿನಲ್ಲಿ ಚಿದಂಬರಂ ಅವರನ್ನು ಪ್ರಶ್ನಿಸಿದ ಬಳಿಕ ಅವರನ್ನು ಬಂಧಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News