ಮೂಡುಬಿದಿರೆ ತಾಲೂಕು ಮಟ್ಟದ ಪ್ರೌಢ, ಪ್ರಾಥಮಿಕ ಶಾಲಾ ಕ್ರೀಡಾಕೂಟ

Update: 2019-10-17 16:52 GMT

ಮೂಡುಬಿದಿರೆ : ದ.ಕ.ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ಹಾಗೂ ಆಲಂಗಾರಿನ ಸಂತ ಥೋಮಸ್ ವಿದ್ಯಾ ಸಂಸ್ಥೆಗಳ ಸಹಯೋಗದಲ್ಲಿ ಸ್ವರಾಜ್ಯ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯುವ ಮೂಡುಬಿದಿರೆ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ "ಕ್ರೀಡಾಕೂಟ-2019-20" ಗುರುವಾರ ಆರಂಭಗೊಂಡಿತು. 

 ಜಿ.ಪಂಚಾಯತ್ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಧೈರ್ಯ ಮತ್ತು ಆತ್ಮವಿಶ್ವಾಸಕ್ಕೆ ಕ್ರೀಡೆಯು ಸ್ಪೂರ್ತಿಯಾಗಲಿ. ಸಣ್ಣ ಪ್ರಾಯದ ಪ್ರಾಥಮಿಕ ಶಿಕ್ಷಣದಲ್ಲಿ ಕ್ರೀಡೆಯ ಬಗ್ಗೆ ಒಲವನ್ನು ಬೆಳೆಸಿಕೊಂಡು, ದೇಶದ ಭಾವನೆಗಳನ್ನು ಅರ್ಥ ಮಾಡಿಕೊಂಡು ಕ್ರೀಡಾ ಸಾಧಕರಾಗಿ ದೇಶವನ್ನು ಪ್ರತಿನಿಧಿಸುವ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಮೂಡಿ ಬರಲಿ ಎಂದು ಹಾರೈಸಿದರು. 

ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಪಾಠ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸೋಲು-ಗೆಲುವು ಸಹಜ. ಸೋತಾಗ ಕುಗ್ಗದೆ, ಗೆದ್ದಾಗ ಹಿಗ್ಗದೆ ಇವೆರಡವುಗಳನ್ನು ವಿದ್ಯಾರ್ಥಿಗಳು ಸಮಾನವಾಗಿ ಸ್ವೀಕರಿಸಬೇಕೆಂದು ಸಲಹಎ ನೀಡಿದ ಅವರು ಇಲ್ಲಿ ಸ್ಪರ್ಧಿಸುವ ಎಲ್ಲಾ ಕ್ರೀಡಾಪಟುಗಳು ಮುಂದಿನ ದಿನಗಳಲ್ಲಿ ರಾಜ್ಯ, ರಾಷ್ಟ್ರ ಅಂತರಾಷ್ಟ್ರಮಟ್ಟಗಳಲ್ಲಿ ಭಾಗವಹಿಸುವ ಮೂಲಕ ಜಿಲ್ಲೆಗೆ ಹಾಗೂ ತಮ್ಮ ಊರಿನ ಕೀರ್ತಿ ಪತಾಕೆಯನ್ನು ಎತ್ತರಿಸಬೇಕೆಂದರು.

ಆಲಂಗಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ ಭಟ್ ಅವರು ಕ್ರೀಡಾ ಪಟುಗಳಾದ ರಾಮ್, ರಾಜಶ್ರೀ ಆಚಾರ್ಯ, ರಾಯ್‍ಸ್ಟನ್ ಮೋರಾಸ್, ಅಮೃತಾ ಶೆಟ್ಟಿ, ವೀರೇಂದ್ರ ಡಿ"ಸೋಜಾ, ಜೇನ್ ಅಣ್ಣಿ ಡಿ"ಸೋಜಾ, ಸುಶ್ರೀತಾ ಮತ್ತು ಆದಿತ್ಯ ಆರ್ ಅವರಿಂದ ಕ್ರೀಡಾಜ್ಯೋತಿಯನ್ನು ಸ್ವೀಕರಿಸಿದರು. 

ಸಂತ ಥೋಮಸ್ ವಿದ್ಯಾ ಸಂಸ್ಥೆಗಳ ಸಂಚಾಲಕ, ಧರ್ಮಗುರು ವಾಲ್ಟರ್ ಡಿ"ಸೋಜಾ ಅವರು ಆಶೀರ್ವಚನ ನೀಡಿದರು. ಮಾಜಿ ಸಚಿವರುಗಳಾದ ಕೆ. ಅಮರನಾಥ ಶೆಟ್ಟಿ ಧ್ವಜಾರೋಹನಗೈದರು. ಕೆ.ಅಭಯಚಂದ್ರ ಜೈನ್ ಗೌರವ ರಕ್ಷೆಯನ್ನು ಸ್ವೀಕರಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಂಘದ ಅಧ್ಯಕ್ಷ ನಾಗೇಶ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಿನಯ್ ಕುಮಾರ್, ವಲೇರಿಯನ್ ಸಿಕ್ವೇರಾ, ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಉಪಾಧ್ಯಕ್ಷ ರಾಮಕೃಷ್ಣ ಶೀರೂರು, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ, ಸಂತ ಥೋಮಸ್ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಹೆಲೆನ್ ಗೋವಿಯಸ್ ಉಪಸ್ಥಿತರಿದ್ದರು.

ಇಂಗ್ಲಿಷ್ ಮಾಧ್ಯಮದ ಮುಖ್ಯ ಶಿಕ್ಷಕಿ ಸಿಲ್ವಿಯಾ ಡೇಸಾ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ರೀಡಾಪಟು ರಿಚೆಲ್ ಜೆಸ್ಸಿಕಾ ಸಲ್ದಾನ ಪ್ರತಿಜ್ಞಾವಿಧಿ ಬೋಧಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಅಂಬೂರಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಕುಸುಮಾ ವಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News